Breaking News

ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ನೀರು ಪೋಲು

Spread the love

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದ ಹೊರಭಾಗದಲ್ಲಿರುವ ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2.50 ಟಿಎಂಸಿ ನೀರು ಸಂಗ್ರಹ‌ ಸಾಮರ್ಥ್ಯ ಹೊಂದಿರುವ ಮಾಲವಿ ಜಲಾಶಯ, ಈ ಬಾರಿ ಉತ್ತಮ ಮಳೆಯಾಗಿದ್ದರಿಂದ ಭರ್ತಿಯಾಗಿದೆ. ಆದ್ರೆ ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ಕೃಷಿ ಚಟುವಟಿಕೆಗೆ ಬಳಕೆಯಾಗಬೇಕಿದ್ದ ಜಲಾಶಯದ ನೀರು ವ್ಯರ್ಥವಾಗಿ ಹರಿಯುತ್ತಿದೆ.

ಕ್ರಸ್ಟ್ ಗೇಟ್‌ ಸಮಸ್ಯೆಯಿಂದ ನೀರು ಪೋಲಾಗುತ್ತಿದೆ. ಪೋಲಾಗುತ್ತಿರುವ ನೀರು ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಒಡೆದಿರುವ ಮಣ್ಣಿನ ಗೋಡೆ ದುರಸ್ಥಿಗೊಳಿಸುವಂತೆ ಒತ್ತಾಯಿಸಿದ್ದಾರೆ‌.


Spread the love

About Laxminews 24x7

Check Also

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

Spread the loveಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ