Breaking News

ಟೆಲಿಫೋನ್​ ಕದ್ದಾಲಿಕೆ ಆರೋಪ ಪ್ರಕರಣ: ಅಲೋಕ್​ ಕುಮಾರ್​ ವಿರುದ್ಧದ ಇಲಾಖಾವಾರು ತನಿಖೆ ರದ್ದುಪಡಿಸಿದ ಸಿಎಟಿ

Spread the love

ಬೆಂಗಳೂರು: ಟೆಲಿಫೋನ್​ ಕದ್ದಾಲಿಕೆ ಆರೋಪ ಸಂಬಂಧ ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರ ವಿರುದ್ಧ ಇಲಾಖಾವಾರು ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಇಂದು ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ಅರ್ಜಿದಾರ ಅಲೋಕ್​ ಕುಮಾರ್ ರಿಗೆ ಸಲ್ಲಬೇಕಾದ ಎಲ್ಲ ರೀತಿಯ ಸವಲತ್ತುಗಳನ್ನು ಲಭ್ಯವಾಗುವಂತೆ ಮಾಡಬೇಕು ಎಂದು ಪೀಠ ತಿಳಿಸಿದೆ.

ಟೆಲಿಫೋನ್​ ಕದ್ದಾಲಿಕೆ ಪ್ರಕರಣ ಸಂಬಂಧ ತನ್ನ ವಿರುದ್ಧ ಇಲಾಖಾವಾರು ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಆಲೋಕ್​ ಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಅಧ್ಯಕ್ಷ ನ್ಯಾ.ರಣಜಿತ್​ ವಸಂತರಾವ್ ಮೊರೆ ಅವರಿದ್ದ ಪೀಠ ಈ ಆದೇಶ ನೀಡಿತು.

2019ರಲ್ಲಿ ನಡೆದಿದ್ದ ಕದ್ದಾಲಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಆರೋಪ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಅರ್ಜಿದಾರ ಅಲೋಕ್​ ಕುಮಾರ್​ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಿತ್ತು. ಅಲ್ಲದೆ, ಹೆಚ್ಚುವರಿ ಅಂತಿಮ ಪಟ್ಟಿ ಸಲ್ಲಿಸಿದ್ದು ಇಲಾಖೆಯಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿತ್ತು. ಈ ವರದಿಯನ್ವಯ ರಾಜ್ಯ ಸರ್ಕಾರ ಇಲಾಖಾವಾರು ತನಿಖೆಗೆ ಆದೇಶಿಸಿತ್ತು. ಅಲ್ಲದೆ, ಅರ್ಜಿದಾರರಿಗೆ ಸಿಗಬೇಕಾದ ಬಡ್ತಿ ಸೇರಿದಂತೆ ಇತರೆ ಸೌಲಭ್ಯಗಳಿಗೆ ತಡೆ ನೀಡಿತ್ತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ