Breaking News

ಕಸ್ತೂರಿ ರಂಗನ್ ವರದಿಯು ಸಂಪೂರ್ಣ ಅವೈಜ್ಞಾನಿಕವಾಗಿದೆ.: ವರದಿ ತಿರಸ್ಕರಿಸಿದ ರಾಜ್ಯಸರಕಾರ

Spread the love

ಬೆಂಗಳೂರು : ಡಾ.ಕಸ್ತೂರಿ ರಂಗನ್ ವರದಿಯ ಬಗ್ಗೆ ಇಂದು ಸಚಿವ ಸಂಪುಟ ಉಪಸಮಿತಿಯ ಸಭೆಯನ್ನು ಸಮಿತಿ ಅಧ್ಯಕ್ಷ ಆನಂದ ಸಿಂಗ್ ಅವರ ನೇತೃತ್ವದಲ್ಲಿ ನಡೆಸಿ, ವರದಿ ಕುರಿತು ಸಮಿತಿ ಸದಸ್ಯರೊಂದಿಗೆ ವರದಿಯ ಸಾಧಕ – ಭಾದಕಗಳ ಕುರಿತು ವಿಸ್ತೃತವಾಗಿ  ಚರ್ಚಿಸಲಾಯಿತು.
 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಪರಿಸರ ಖಾತೆ ಸಚಿವ  ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದು ಈ  ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯು ಸಂಪೂರ್ಣ ಅವೈಜ್ಞಾನಿಕವಾಗಿದೆ. ಈ ವರದಿಯಿಂದಾಗಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಾಕಷ್ಟು ಸಮಸ್ಯೆ ಉಲ್ಬಣವಾಗಲಿದೆ. ಈ ನಿಟ್ಟಿನಲ್ಲಿ ವರದಿಯನ್ನು ಪುನರ್ ಪರಿಶೀಲಿಸಿದ ನಂತರವೇ ವರದಿಯನ್ನು ಒಪ್ಪಿಕೊಳ್ಳಲಾಗುವುದು. ಈ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಲಾಯಿತು ಹಾಗೂ ಕೇಂದ್ರ ಪರಿಸರ ಖಾತೆ ಸಚಿವರಿಗೆ ಈ  ಸಭೆಯ ಮಾಹಿತಿಯನ್ನು ತುರ್ತಾಗಿ ತಿಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ಉಪಸಮಿತಿಯ ಅಧ್ಯಕ್ಷರು ಹಾಗೂ ಅರಣ್ಯ ಸಚಿವರಾದ ಆನಂದ ಸಿಂಗ್, ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ,  ಗೃಹಸಚಿವ ಬಸವರಾಜ ಬೋಮ್ಮಾಯಿ , ಕಂದಾಯ ಸಚಿವ ಆರ್.ಅಶೋಕ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಹಾಗೂ ಉಪ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದರು.

Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ