Breaking News

ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ

Spread the love

ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ…

ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ

ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ…
ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ
ಆಗ ವಿರೋಧಿಸದವರು ಈಗೇಕೆ ವಿರೋಧಿಸುತ್ತಿದ್ದಾರೆ?
ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ನಾವು ಜಾರಿಗೊಳಿಸಿದ್ದೇವೆ, ಆಗ ವಿರೋಧ ಮಾಡದವರು ಈಗ ಯಾಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಂದು ಮೈಸೂರಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಾರ್ಗೆಟ್ ಆರ್ ಎಸ್ ಎಸ್ ಅಲ್ಲವೇ ಅಲ್ಲ, ಶಾಲಾ ಆವರಣದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಸುತ್ತೋಲೆ ಹೊರಡಿಸಿದ್ದರು.ಅದನ್ನೇ ನಾವೀಗ ಜಾರಿಗೊಳಿಸುತ್ತಿದ್ದೇವೆ.

 

ಸರ್ಕಾರದ ಆದೇಶ ಕೇವಲ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮಾತ್ರವಲ್ಲ, ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೂ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಎಲ್ಲಾ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ