Breaking News

ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ.

Spread the love

ನ್ಯಾ.ಬಿ.ಆರ್ ಗವಾಯಿ ಮೇಲೆ ಶೂ ದಾಳಿ ವಿಚಾರ
‌…ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ.
ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ನಡೆದ ಶೂ ದಾಳಿ ಖಂಡಿಸಿ ಹಾಗೂ ಶೂ ದಾಳಿದಾತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತೆರು ಬೀದುಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ‌
ವೈ- ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ಕಾನೂನು ಪರವಾಗಿ ತೀರ್ಪು ನೀಡಿದ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಿಕೃತ ಮನಸ್ಸಿನ, ಜನವಿರೋಧಿ ಹಾಗೂ ಸಂವಿಧಾನ ವಿರೋಧಿ ಮನಸ್ಥಿತಿ ಹೊಂದಿದ ವಕೀಲ ರಾಕೇಶ್ ಕಿಶೋರ ಶೂ ಎಸೆದಿದ್ದಾರೆ. ವಕೀಲ ರಾಕೇಶ ಕಿಶೋರ್ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ