Breaking News

ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್

Spread the love

ಬೆಳಗಾವಿ: ಜನಪರ ಸೇವೆ ಮಾಡುತ್ತಿರುವ ಸರ್ವಲೋಕಾ ಸೇವಾ ಫೌಂಡೇಶನ್ ಸೇವೆಯನ್ನು ಪರಿಗಣಿಸಿ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ, ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಅಂಬ್ಯುಲೆನ್ಸ್ ಕೊಡುಗೆ ನೀಡಿದ್ದು,
ನಮಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಇವರು ಕೊಟ್ಟಿರುವ ಈ ವಾಹನದಲ್ಲಿ ಶಕ್ತಿ ಮೀರಿ ಮತ್ತಷ್ಟು ಬಡವರ ಸೇವೆ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನ ಸಮಸ್ತ ಸಂಚಾಲಕ, ಆಡಳಿತ ‌ಮಂಡಳಿ, ನೀಲಕಂಠಯ್ಯ ಹಿರೇಮಠ ಶಾಸ್ತ್ರೀಯವರು, ಶರದಚಂದ್ರ ಶಾಸ್ತ್ರೀಯವರು, ಬಾವುಸಾಬ್ ಅತ್ತಾರ, ಪ್ರವೀಣ್ ಹಿರೇಮಠ, ನಾಗಯ್ಯ ಪೂಜಾರ,ಆನಂದ ಭಾತ್ಕಂಡೆ, ಗೌರಿಶ್ ಹಿರೇಮಠ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ