ಯಕ್ಸಂಬಾ
ಇಂದು 9ನೇ ಪ್ರೇರಣಾ ಉತ್ಸವದ ಅಂಗವಾಗಿ, ಶ್ರೀ ಜ್ಯೋತಿಬಾ ಮಂದಿರದವರೆಗೆ ನಡೆದ ಭಕ್ತಿ ಸಮರ್ಪಣೆಯ ಸಾಮೂಹಿಕ ಗುಗ್ಗುಳೋತ್ಸವಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಮತ್ತು ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. ಬಸವಪ್ರಸಾದ ಜೊಲ್ಲೆ ಯವರು ಚಾಲನೆ ನೀಡಿದರು.
ನಾಡಿನ ಒಳಿತಿಗಾಗಿ ಈ ಪುಣ್ಯಕಾರ್ಯವನ್ನು ಹಮ್ಮಿಕೊಂಡಿದ್ದು, ಸರ್ವರಿಗೂ ಶ್ರೀ ದೇವರು ಸುಖ, ಸಂತೋಷ, ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.