ಬಿಬಿಎಂಪಿ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರು ನಾಮಕರಣ ವಿರೋಧಿಸಿ ಹೆಗಡೆಯಿಂದ ಆಯುಕ್ತರಿಗೆ ಪತ್ರ
ಕಾರವಾರ: ಬೆಂಗಳೂರು ಮಹಾನಗರ ಪಾಲಿಕೆಯ ಪಾದರಾಯನಪುರದ ವಾರ್ಡ್ನಲ್ಲಿರುವ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರನ್ನು ನಾಮಕರಣ ಮಾಡುವುದುನ್ನು ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಪಾಲಿಕೆಯ ಆಯುಕ್ತರಿಗೆ ಪತ್ರ ಬರೆದು ವಿರೋಧ ವ್ಯಕ್ತಪಡಿಸಿದ್ದಾರೆ.
ಪಾದರಾಯನಪುರದ ವಾರ್ಡ್ ಸಂಖ್ಯೆ 135 ರಲ್ಲಿ ಬರುವ ಅಡ್ಡ ರಸ್ತೆಗಳಿಗೆ ಸಮಾಜ ಸೇವಕರ ಹೆಸರು ಇಡಲು ತೀರ್ಮಾನಿಸಿತ್ತು. ಈ ಸಂಬಂಧ ಪತ್ರಿಕಾ ಪ್ರಕಟಣೆ ಸಹ ನೀಡಿತ್ತು. ಈ ಸಂಬಂಧ ಕೇವಲ ಮುಸಲ್ಮಾನರ ಹೆಸರನ್ನು ಶಿಫಾರಸ್ಸು ಮಾಡಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.