ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್ಬಾಗ್ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಲಾಲ್ಬಾಗ್ನಲ್ಲಿ ಜನಜಾಗೃತಿ ಅಭಿಯಾನ ನಡೆಸಿದರು. ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಅಶ್ವತ್ಥ ನಾರಾಯಣ ಅವರು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಸಹಿ ಸಂಗ್ರಹಿಸಿದರು.
ಇದೇ ವೇಳೆ, ಜಿಬಿಎ ಮುಖ್ಯ ಇಂಜಿನಿಯರ್ ಹಾಗೂ ಲಾಲ್ಬಾಗ್ ಜಂಟಿ ನಿರ್ದೇಶಕರಿಂದ ಮಾಹಿತಿ ಪಡೆದ ಅಶೋಕ್, ಆರು ಎಕರೆ ಬಳಸಿಕೊಂಡರೆ ಇದು ಮಾರ್ಕೆಟ್ ಆಗುವುದಿಲ್ಲವೇ?. ಮುಂದೆ ನಾವೂ ಇರಲ್ಲ, ನೀವೂ ಇರಲ್ಲ. ಆದ್ರೆ ನಾವು ಮಾಡುವ ಆದೇಶ ಉಳಿದುಕೊಳ್ಳುತ್ತದೆ. ಬೆಂಗಳೂರಿಗೆ ಯಾರು ಬಂದರೂ ಮೊದಲು ನೋಡುವುದೇ ಲಾಲ್ಬಾಗ್, ವಿಧಾನಸೌಧ ಎಂದರು.
Laxmi News 24×7