Breaking News

ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

Spread the love

ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್​ಬಾಗ್​ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.

ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಲಾಲ್​ಬಾಗ್​ನಲ್ಲಿ ಜನಜಾಗೃತಿ ಅಭಿಯಾನ ನಡೆಸಿದರು. ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ಅಶ್ವತ್ಥ ನಾರಾಯಣ ಅವರು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿ, ಸಹಿ ಸಂಗ್ರಹಿಸಿದರು.

ಇದೇ ವೇಳೆ, ಜಿಬಿಎ ಮುಖ್ಯ ಇಂಜಿನಿಯರ್ ಹಾಗೂ ಲಾಲ್​ಬಾಗ್​ ಜಂಟಿ ನಿರ್ದೇಶಕರಿಂದ ಮಾಹಿತಿ ಪಡೆದ ಅಶೋಕ್, ಆರು ಎಕರೆ ಬಳಸಿಕೊಂಡರೆ ಇದು ಮಾರ್ಕೆಟ್ ಆಗುವುದಿಲ್ಲವೇ?. ಮುಂದೆ ನಾವೂ ಇರಲ್ಲ, ನೀವೂ ಇರಲ್ಲ. ಆದ್ರೆ ನಾವು ಮಾಡುವ ಆದೇಶ ಉಳಿದುಕೊಳ್ಳುತ್ತದೆ. ಬೆಂಗಳೂರಿಗೆ ಯಾರು ಬಂದರೂ ಮೊದಲು ನೋಡುವುದೇ ಲಾಲ್‌ಬಾಗ್, ವಿಧಾನಸೌಧ ಎಂದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಶೋಕ್, ಬೆಂಗಳೂರಿನ ಪರಿಸರಪ್ರೇಮಿಗಳ ಇತಿಹಾಸ ಹೊಂದಿರುವ ಸಸ್ಯಕಾಶಿಗೆ ರಾಜ್ಯ ಸರ್ಕಾರ ಗುಂಡಿ ತೋಡುವ ಕೆಲಸ ಮಾಡುತ್ತಿದೆ. ಟನಲ್ ರಸ್ತೆಯ ಯೋಜನೆಯಿಂದ ಬೆಂಗಳೂರಿನ‌ ಪರಿಸರ ಹಾಳಾಗುತ್ತದೆ. ಇದರಿಂದ ಬೆಂಗಳೂರಿನ ಜನ ನಿದ್ದೆಗೆಡುವಂತಾಗಿದೆ. 18 ಕಿ.ಮೀ ಟನಲ್ ರಸ್ತೆ ನಿರ್ಮಾಣವಾದರೆ ಟ್ರಾಫಿಕ್ ಸಂಪೂರ್ಣವಾಗಿ ಕಡಿಮೆಯಾಗುತ್ತದೆ ಎಂದರೆ ಮಾಡಿ, ನಾವು ಬೆಂಬಲ ಕೊಡುತ್ತೇವೆ ಎಂದು ಹೇಳಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ