Breaking News

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the love

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು
ವಿಜಯಪುರದ ಆನಂದನಗರದಲ್ಲಿರುವ ಶ್ರೀ ದಾನಮ್ಮದೇವಿ ದೇವಸ್ಥಾನದ 15ನೇ ವರ್ಷದ ಜಾತ್ರಾ ಮಹೋತ್ಸವವು ಭಕ್ತಿಯ ಮತ್ತು ಭಾವಭರವೆಯ ವಾತಾವರಣದಲ್ಲಿ ನಡೆಯತ್ತಿದೆ.‌
May be an image of text
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭಾಗವಹಿಸಿ‌, ದಾನಮ್ಮದೇವಿ ಆಶಿರ್ವಾದ ಪಡೆದರು. ಈ ಮಹೋತ್ಸವದಲ್ಲಿ ಶ್ರೀ ಮ.ನಿ.ಪ್ರ. ಸ್ವಾಮೀಜಿ ಗುರು ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು (ಅನ್ನದಾನಿಶ್ವರ ದೇವಮಂದಿರ, ಮಹಾಮಠ, ಸುಕ್ಷೇತ್ರ ಮಣಕವಾಡ–ಹಿರೇವಡ್ಡಟ್ಟಿ) ಅವರ ದಿವ್ಯ ಸಾನಿಧ್ಯದಲ್ಲಿ ಸಚಿವ ಎಂ.ಬಿ.ಪಾಟೀಲ ಪ್ರವಚನ ಆಲಿಸಿದರು. ಬಳಿಕ ಮಾತನಾಡಿದ ಸಚಿವರು ಸ್ವಾಮೀಜಿಯವರ ಆಗಮನದಿಂದ ಭಕ್ತರಲ್ಲಿ ಉತ್ಸಾಹ ಹೆಚ್ಚಾಗಿದ್ದು,
ಅವರು ಮಾತೆ ದಾನಮ್ಮದೇವಿಯ ದರ್ಶನ ಪಡೆದು ದೇವಿಯ ಕೃಪೆ ಹಾಗೂ ಆಶೀರ್ವಾದ ಎಲ್ಲರ ಮೇಲೂ ಇರಲೆಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಭಕ್ತರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿ ಭಕ್ತಿಭಾವದಿಂದ ಪೂಜೆ-ಪಾಠಗಳಲ್ಲಿ ತೊಡಗಿದ್ದರು. ದೇವಾಲಯ ಆವರಣದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ