Breaking News

ಡೆಲಿವರಿ ಬಾಯ್​ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

Spread the love

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್​ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್​ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್​ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ ನೇಮಿಸುತ್ತಿರುವುದರಿಂದ ಗ್ರಾಹಕರೊಂದಿಗೆ ಅನುಚಿತ ವರ್ತನೆ ತೋರುವುದು, ರೋಡ್ ರೇಜ್​ನಲ್ಲಿ ಭಾಗಿ, ಡೆಲಿವರಿ ವಿಳಂಬದ ಬಗ್ಗೆ ಪ್ರಶ್ನಿಸಿದರೆ ಗ್ರಾಹಕರ ಮೇಲೆ ಹಲ್ಲೆ, ಸರಗಳ್ಳತನ, ಗ್ರಾಹಕರು ಆರ್ಡರ್ ಮಾಡುವ ವಸ್ತು ಕಳ್ಳತನ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಡೆಲಿವರಿ ಬಾಯ್​ಗಳು ಭಾಗಿಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಡೆಲಿವರಿ ಬಾಯ್​ಗಳು ಅಪರಾಧ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದರೆ ಕಂಪನಿಗಳ ಮುಖ್ಯಸ್ಥರು ಅಥವಾ ಸಿಇಒ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ಖಡಕ್ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ