ಜೊಲ್ಲೆ ಎಜ್ಯುಕೇಶನ್ ಸೊಸೈಟಿಯ ಅಂಗಸಂಸ್ಥೆಯಾದ ಬಸವಜ್ಯೋತಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಕಾಲೇಜ,ಸ್ವಾಮಿ ವಿವೇಕಾನಂದ ಬಿ.ಸಿ.ಎ.ಕಾಲೇಜ ಮತ್ತು ಮೌಲಾನಾ ಅಬುಲ ಕಲಾಂ ಆಜಾದ್ ಬಿ.ಎಸ್.ಡಬ್ಲೂ ಮತ್ತು ಎಂ.ಎಸ್.ಡಬ್ಲೂ ಕಾಲೇಜ ನನದಿ ಸಂಯುಕ್ತಾಶ್ರಯದಲ್ಲಿ 2025-26 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಶ್ರೀ ಜ್ಯೋತಿಪ್ರಸಾದ ಮತ್ತು ಬಸವಪ್ರಸಾದ ಜೊಲ್ಲೆ ಯವರು ಉದ್ಘಾಟಿಸಿ,ಚಾಲನೆ ನೀಡಿ ಮಾತನಾಡಿದರು.
ಮನಸಿದ್ದರೆ ಮಾರ್ಗ ಎಂಬ ಮಾತಿನಂತೆ ವಿದ್ಯಾರ್ಥಿಗಳೆಲ್ಲರೂ ಸಂಸ್ಕಾರಯುತವಾದಂತಹ ಶಿಕ್ಷಣವನ್ನು ಗಮನದಲ್ಲಿಟ್ಟುಕೊಂಡು ಕಲಿಯುವುದು ಅವಶ್ಯಕವಾಗಿದೆ.ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಪ್ರಮುಖವಾದದ್ದು.ವಿಧ್ಯಾರ್ಥಿಗಳ ಸಮಯ ಪಾಲನೆ, ಶಿಸ್ತು, ಅಧ್ಯಯನ ಕಡೆ ಗಮನ ಕೊಡಬೇಕೆಂದು ಸಲಹೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ರಾ.ಚ.ವಿ.ವಿ.ವಾಣಿಜ್ಯ ಪ್ರಾಧ್ಯಾಪಕರಾದ ಪ್ರೋ. ಬಿ ಎಸ್ ನಾವಿ,ಶಿಕ್ಷಣ ಸಂಸ್ಥೆಯ ಸಮನ್ವಯ ಅಧಿಕಾರಿಗಳಾದ ಶ್ರೀ ಮಹಾದೇವ ಪಾಟೀಲ,ಪ್ರಾಚಾರ್ಯರು,ಎಲ್ಲ ವಿಭಾಗದ ಮುಖ್ಯಸ್ಥರು, ಶಿಕ್ಷಕರು,ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Laxmi News 24×7