Breaking News

ವಿರೋಧದ ಮಧ್ಯೆ ಬೆಂಗಳೂರಿನಲ್ಲಿ ಟನಲ್ ರಸ್ತೆ ಗುದ್ದಲಿ ಪೂಜೆಗೆ ಮುಹೂರ್ತ ಫಿಕ್ಸ್

Spread the love

ಬೆಂಗಳೂರು, (ನವೆಂಬರ್ 14): ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ರಸ್ತೆ (Bengaluru Tunnel Road) ನಿರ್ಮಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಈಗಾಗಲೇ ಹಲವು ಅಪಸ್ವರ ಕೇಳಿಬರುತ್ತಿದೆ. ಲಾಲ್ ಬಾಗ್ ಗೆ ಹಾನಿಯಾಗುತ್ತೆ, ಟ್ರಾಫಿಕ್ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತೆ ಎನ್ನುವ ಆರೋಪಗಳ ಜೊತೆಗೆ ಇದೀಗ ಟನಲ್ ರಸ್ತೆಯ ನಿರ್ಮಾಣದಿಂದ ರಾಜಧಾನಿಯ ಅಂತರ್ಜಲಮಟ್ಟಕ್ಕೂ ಹೊಡೆತ ಬೀಳುವ ಆತಂಕ ಎದುರಾಗಿದೆ. ಸದ್ಯ ಹೆಬ್ಬಾಳ ಟು ಸಿಲ್ಕ್ ಬೋರ್ಡ್ ತನಕ ನಡೆಸಲು ಹೊರಟಿರೋ ಟನಲ್ ರೋಡ್ ಕಾಮಗಾರಿ ಆರಂಭವಾದ್ರೆ ಆ ಮಾರ್ಗದ ಅಂತರ್ಜಲ ಮೂಲಗಳಿಗೆ ಕಂಟಕ ಎದುರಾಗುತ್ತೆ ಎಂದು ತಜ್ಞರು, ಪರಿಸರಪ್ರಿಯರು ಆತಂಕ ಹೊರಹಾಕಿದ್ದಾರೆ. ಟನಲ್ ರಸ್ತೆಯಿಂದ ಭೂಮಿಯ ಪದರಗಳ ಮೇಲೆ ಆಗೋ ಒತ್ತಡದ ಜೊತೆಗೆ ಅಂತರ್ಜಲಕ್ಕೂ ಕಂಟಕ ಆಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಆದ್ರೆ, ಇತ್ತ ಟನಲ್ ರಸ್ತೆಯ ನಿರ್ಮಾಣದ ಬಗ್ಗೆ ಹಲವು ಅಸಮಾಧಾನ ವ್ಯಕ್ತವಾದ್ರೂ ಕೂಡ ಟನಲ್ ರಸ್ತೆಯನ್ನ ನಿರ್ಮಿಸಲು ರಾಜ್ಯ ಸರ್ಕಾರ ಮಾತ್ರ ತುದಿಗಾಲಲ್ಲಿ ಕಾದುನಿಂತಿದ್ದು, ಹೊಸ ವರ್ಷದಲ್ಲೇ ಗುದ್ದಲಿಪೂಜೆ ಪ್ಲಾನ್ ಮಾಡಿದೆ.ಸದ್ಯ ಸಾಲು ಸಾಲು ವಿರೋಧದ ನಡುವೆಯೇ ಟನಲ್ ರಸ್ತೆ ಕಾಮಗಾರಿ ಆರಂಭಕ್ಕೆ ಮುಹೂರ್ತ ಇಡಲು ಹೊರಟಿರೋ ಸರ್ಕಾರ ಜನವರಿ ಅಂತ್ಯ ಅಥವಾ ಫೆಬ್ರವರಿಯ ಆರಂಭದಲ್ಲಿ ಟನಲ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನಡೆಸೋಕೆ ಸದ್ದಿಲ್ಲದೇ ತಯಾರಿ ನಡೆಸುತ್ತಿದೆ.ಟಿಬಿಎಂ ಮಷಿನ್ ಗಳ ಮೂಲಕ ಸುರಂಗ ಕೊರೆಯೋ ಕಾರ್ಯಕ್ಕೆ ಚಾಲನೆ ನೀಡಲು ಸರ್ಕಾರ ಪ್ಲಾನ್ ರೆಡಿಮಾಡಿಕೊಂಡು ಕಾದು ಕುಳಿತಿದೆ. ಇನ್ನು ಸರ್ಕಾರದ ಟನಲ್ ರಸ್ತೆಯ ಪ್ಲಾನ್ ಗೆ ಆರಂಭದಿಂದಲೂ ಅಸಮಾಧಾನ ಹೊರಹಾಕ್ತಿದ್ದ ವಿಪಕ್ಷ ನಾಯಕರು, ಇದೀಗ ಸರ್ಕಾರದ ವಿರುದ್ಧ ಮತ್ತೊಮ್ಮೆ ಸಮರ ಸಾರಲು ಮುಂದಾಗಿದೆ ಹೊರಟಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ