ವಿಜಯಪುರ ಬ್ರೇಕಿಂಗ್: ಸೋತವರ ಮನೆಮುಂದೆ ಬಂದು ಪಟಾಕಿ ಹಚ್ಚಿದ ಗೆದ್ದ ಅಭ್ಯರ್ಥಿಗಳು.
ನಮ್ಮ ಮನೆಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ಪರಾಜಿತ ಅಭ್ಯರ್ಥಿ ಹಾಗೂ ಆತನ ಕುಟುಂಬಸ್ಥರ ಮೇಲೆ ಹಲ್ಲೆ.
ಗೆದ್ದ ಅಭ್ಯರ್ಥಿಗಳ ಬೆಂಬಲಿಗರಿಂದ ಸೋತವರ ಮೇಲೆ ಹಲ್ಲೆ ಆಗಿದೆ ಎಂದು ಹಲ್ಲೆಗೊಳಗಾದವರ ಆರೋಪ.
ಚಡಚಣ ತಾಲೂಕಿನ ಧುಮಕನಾಳ ಗ್ರಾಮದಲ್ಲಿ ಘಟನೆ.
ಪರಾಜಿತ ಅಭ್ಯರ್ಥಿ ಶಿವಪ್ಪ ಕನಾಳ, ರಾಯಪ್ಪ ಕನಾಳ, ಶ್ರೀಶೈಲ ಕನಾಳ, ಪುತಳಾಬಾಯಿ ಕನಾಳ, ಭೀಮಕ್ಕ ಕನಾಳ ಮೇಲೆ ಹಲ್ಲೆ.
ಗೆದ್ದ ಅಭ್ಯರ್ಥಿಗಳಾದ ಚಂದ್ರಕಾಂತ ನಂದಗೊಂಡ, ಅಪ್ಪುಗೌಡ ಪಾಟೀಲ್, ಲಕ್ಷ್ಮಣ ಘೋರ್ಪಡೆ ಬೆಂಬಲಿಗರಿಂದ ಹಲ್ಲೆ ಆಗಿದೆ ಎಂದು ಆರೋಪ.
ನಂದರಗಿ ಗ್ರಾಮ ಪಂಚಾಯತಿಯ 2ನೇ ವಾರ್ಡ್ ಗೆ ಸ್ಪರ್ಧಿಸಿದ್ದ ಶಿವಪ್ಪ ಕನಾಳ.
ಮತ ಎಣಿಕೆ ವೇಳೆ ಬಂದ ಫಲಿತಾಂಶದಲ್ಲಿ ಶಿವಪ್ಪ ಕನಾಳ ಪರಾಜಿತಗೊಂಡಿದ್ದ.