Breaking News

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್

Spread the love

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಇಂದು ರದ್ದುಪಡಿಸಿ ಆದೇಶಿಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಹೊರಡಿಸಿರುವ ಆದೇಶ ಪ್ರಶ್ನಿಸಿ, ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿತು.

ಅಲ್ಲದೆ, ಅರ್ಜಿದಾರರ ವಿರುದ್ಧದ ಆರೋಪ ಸಂಬಂಧ ಮುಂದಿನ 15 ದಿನಗಳಲ್ಲಿ ಹೊಸದಾಗಿ ವಿಚಾರಣೆ ನಡೆಸಿ ಸೂಕ್ತ ಕಾರಣ ಮತ್ತು ಅಗತ್ಯ ಸೆಕ್ಷನ್​ಗಳೊಂದಿಗೆ ಹೊಸ ಆದೇಶವನ್ನು ಹೊರಡಿಸಿದಬೇಕು ಎಂದು ಪುತ್ತೂರಿನ ಉಪ ವಿಭಾಗಾಧಿಕಾರಿಗೆ ನ್ಯಾಯಪೀಠ ನಿರ್ದೇಶನ ನೀಡಿತು.

ಅರ್ಜಿಯ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ”ನಮ್ಮ ಕಕ್ಷಿದಾರರನ್ನು ಗಡಿಪಾರು ಮಾಡಿ ಹೊರಡಿಸಿರುವ ಆದೇಶ ಕಾನೂನುಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ನನ್ನ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಗಡಿಪಾರು ಆದೇಶವನ್ನು ರದ್ದುಪಡಿಸಬೇಕು” ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸರ್ಕಾರದ ಪರ ವಕೀಲರು, ”ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ವಿದ್ಯಾರ್ಥಿನಿಯ ಹೆಸರಿನಲ್ಲಿ ಚಳವಳಿ ಮಾಡುತ್ತಿದ್ದಾರೆ ಎಂಬುದು ಸಾರ್ವಜನಿಕರಿಗೆ ಗೊತ್ತಿದೆ. ಸರ್ಕಾರ ಸಹಜ ನ್ಯಾಯತತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅವರನ್ನು ಗಡಿಪಾರು ಆದೇಶ ಹೊರಡಿಸಿರುವುದಲ್ಲಿ ಯಾವುದೇ ಕಾನೂನು ಪ್ರಕ್ರಿಯೆಯ ಲೋಪವಾಗಿಲ್ಲ” ಎಂದು ಪೀಠಕ್ಕೆ ತಿಳಿಸಿದ್ದರು. ವಾದ–ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಪೀಠ, ಇಂದು ಪ್ರಕಟಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ