ವಿಜಯಪುರ :ರಂಗೋಲಿ ಬಿಡಿಸುವ ಮೂಲಕ ಮಹಿಳೆಯರಿಂದ ಪಿಪಿಪಿ ಮಾದರಿ ಕಾಲೇಜು ವಿರುದ್ಧ ಹೋರಾಟ
ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ಮಹಿಳೆಯರು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ವೃತ್ತಗಳಲ್ಲಿ ರಂಗೋಲಿ ಬಿಡಿಸಿ, ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಸಿದ್ದೇಶ್ವರ ದೇವಸ್ಥಾನ,
ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ 25 ಕಡೆಗಳಲ್ಲಿ ರಂಗೋಲಿ ಬಿಡಿಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.
Laxmi News 24×7