ಬೆಳಗಾವಿ ಸಮೀಪದ ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಇಂದು ಭೇಟಿ ನೀಡಿ,
ಸೋಂಕಿನಿಂದ ಬಳಲುತ್ತಿರುವ ಕೃಷ್ಣಮೃಗಗಳಿಗೆ ಚಿಕಿತ್ಸೆ ನೀಡುತ್ತಿರುವ ನುರಿತ ವೈದ್ಯರ ತಂಡವನ್ನು ಭೇಟಿಯಾಗಿ ಸಂಪೂರ್ಣ ಮಾಹಿತಿಯನ್ನು ಪಡೆಯಲಾಯಿತು.
ಇತ್ತೀಚೆಗೆ ಸೋಂಕಿನ ಹರಡುವಿಕೆಯಿಂದ ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ, ಉಳಿದಿರುವ ಕೃಷ್ಣಮೃಗಗಳಿಗೆ ತುರ್ತು ಆಂಟಿಬಯೋಟಿಕ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದರು.
ಮೃಗಗಳ ರಕ್ಷಣೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಯೋಜನೆ ನಡೆಸಲಾಗುತ್ತಿದೆ.
Laxmi News 24×7