ಬೆಳಗಾವಿಯ ಸಾಯಿರಾಜ್ ಟ್ರೋಫಿಗೆ ಶಾಸಕ ಅಭಯ್ ಪಾಟೀಲ್ ಚಾಲನೆ
ಸಾಯಿರಾಜ್ ಟ್ರೋಫಿಗೆ ಇಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಬೆಳಗಾವಿ ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಪ್ರತಿಷ್ಠಿತ ಕ್ರಿಕೆಟ್ ಸಾಯಿರಾಜ್ ಟ್ರೋಫಿಗೆ ಇಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಹಾಪೌರ ಮಂಗೇಶ್ ಪವಾರ್, ಉಪಮಹಾಪೌರ ವಾಣಿ ಜೋಷಿ ಸೇರಿದಂತೆ ಇನ್ನುಳಿದ ಗಣ್ಯರು ಉಪಸ್ಥಿತರಿದ್ಧರು.
ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ನಗರದಲ್ಲಿ ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಈ ಪಂದ್ಯಾವಳಿಯು ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಅಭಯ್ ಪಾಟೀಲ್ ಹೇಳಿದರು.
ಭಾಗವಹಿಸುವ ಎಲ್ಲ ತಂಡಗಳಿಗೆ ಶುಭ ಕೋರಿದ ಗಣ್ಯರು, ಆಟಗಾರರು ಉತ್ಸಾಹ ಸಮರ್ಪಣೆ
ಮತ್ತು ನಿಜವಾದ ಕ್ರೀಡಾ ಸ್ಫೂರ್ತಿಯೊಂದಿಗೆ ಆಡಬೇಕು ಎಂದು ಹಾರೈಸಿದರು. ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ತೊಡಗಿ ಆರೋಗ್ಯಕರ ಹಾಗೂ ಬಲಿಷ್ಠ ಬೆಳಗಾವಿ ನಿರ್ಮಾಣಕ್ಕೆ ಕೊಡುಗೆ ನೀಡಲಿ ಎಂದು ಆಶಿಸಿದರು.
Laxmi News 24×7