ಚಿಕ್ಕೋಡಿ:ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಡಿಸೆಂಬರ್ 4 ರಂದು ಚಿಕ್ಕೋಡಿಯಲ್ಲಿ ರೈತರಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಹಸಿರು ಸೇನೆ ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ ಹೇಳಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ೧೫ ಹಳ್ಳಿಗಳಿಗೆ ನೀರು ಪೂರೈಕೆ ಮಾಡುವ ಮಹತ್ವದ ಯೋಜನೆಯಾದ ಕರಗಾಂವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಆದಷ್ಟು ಬೇಗನೆ ಪ್ರಾರಂಭಿಸುವಂತೆ ಆಗ್ರಹಿಸಿ ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಹೋರಾಟವನ್ನು ಮಾಡಲಾಗುವುದು.
ಈ ಹೋರಾಟ ರೈತ ಸಂಘದ ರಾಜ್ಯಾಧ್ಯಕ್ಷರಾದ ಚುನ್ನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರು ಸಹ ಭಾಗಿಯಾಗಲಿದ್ದಾರೆ.ಈ ಕಾರಣಕ್ಕೆ ಹೆಚ್ಚಿನ ರೈತರು ಈ ಹೋರಾಟದಲ್ಲಿ ಭಾಗವಹಿಸಿ ಸಹಕರಿಸಬೇಕೆಂದು ಸತ್ಯಪ್ಪ ಮಲ್ಲಾಪೂರೆಯವರು ಮನವಿಯನ್ನು ಮಾಡಿಕೊಂಡರು.
ಸತ್ಯಪ್ಪ ಮಲ್ಲಾಪೂರೆ,ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮನೋಜ ಮನಗೂಳಿ,ಸಿದ್ರಾಮ ಕರಗಾಂವೆ,ಗೋಪಾಲ ಕೊಕನೂರ,ಮುರಗೇಪ್ಪ ಅಡಿಚೆರಿ,ಬಸವರಾಜ ಪಶ್ಚಾಪೂರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7