ನವದೆಹಲಿ; ಹೊಸ ವರ್ಷದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಸ್ಸಾಂ ನ ಗುವಾಹಟಿಯ ನೀಲಾಚಲ ಬೆಟ್ಟದ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನಿಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್, ಶಾಸಕ ಮಹೇಶ್ ಕುಮಟಳ್ಳಿ ಸಾಥ್ ನೀಡಿದ್ದಾರೆ.
ಕಾಮಾಕ್ಯ ದೇವಾಲಯದಲ್ಲಿ ಭುವನೇಶ್ವರಿ, ಬಾಗಲಮುಖಿ, ಚಿನ್ನಮಸ್ತ, ತ್ರಿಪುರ ಸುಂದರಿ ಹಾಗೂ ತಾರ ದೇವಿ ರೂಪದಲ್ಲಿ ಜಗನ್ಮಾತೆಯನ್ನು ಆರಾಧಿಸಲಾಗುತ್ತಿದ್ದು, ಮಹಾಮಾರಿ ಕೊರೊನಾ ಸೋಂಕು ಕೊನೆಗೊಳ್ಳಲಿ ಎಂದು ವಿಶೇಷವಾಗಿ ಪ್ರಾರ್ಥಿಸಿದ್ದಾಗಿ ಸಚಿವರು ತಿಳಿಸಿದ್ದಾರೆ.