ಬೆಳಗಾವಿ: ಜಿಲ್ಲಾ ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ಶುಕ್ರವಾರ ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಎಬಿವಿಪಿ ನಾಯಕರಾಗಿ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದ ರಾಜು ಚಿಕ್ಕನಗೌಡರ್, ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರ ಪಾರ್ಥೀವ ಶರೀರವನ್ನು ಶನಿವಾರ ಬೆಳಗಾವಿಗೆ ತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.