Breaking News

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the love

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ ಇದೆ. ಈ ನಡುವೆ ಮಂಗಳೂರಿನಲ್ಲಿ ಬ್ಯಾಂಕ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ವಂಚಕರು ಹಿರಿಯ ದಂಪತಿಗಳನ್ನು ಡಿಜಿಟಲ್ ಅರೆಸ್ಟ್​ ಮಾಡಿ ಹಣ ದೋಚುವುದನ್ನು ತಪ್ಪಿಸಲಾಗಿದೆ.

ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನ್ಡ್ಡಿಕ್ ಪೆರ್ನಾಂಡಿಸ್ (84 ವರ್ಷ) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71 ವರ್ಷ) ರವರಿಗೆ ಡಿಸೆಂಬರ್ 1 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್ ಫೋನ್ ವಾಟ್ಸ್​ಆ್ಯಪ್​ ಮೂಲಕ ಸಂಪರ್ಕಿಸಿದ್ದರು. ಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್​​ಗೆ ಒಳಪಡಿಸಿದ್ದರು.

ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದರು. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಏಕೆ ವರ್ಗಾವಣೆ ಮಾಡುತ್ತಿದ್ದೀರಿ ಎಂದು ಕೇಳಿದ್ದಕ್ಕೆ ವೃದ್ದದಂಪತಿಗಳು ಸರಿಯಾದ ಉತ್ತರ ನೀಡಿರಲಿಲ್ಲ.

ಇದರಿಂದ ಸಂಶಯಗೊಂಡು, ಸೈಬರ್ ವಂಚಕರು ಒದಗಿಸಿದಂತಹ ಖಾತೆಗೆ ಹಣವನ್ನು ವರ್ಗಾವಣೆ ಮಾಡದೇ, ಬ್ಯಾಂಕ್ ಮ್ಯಾನೇಜರ್​ ಕಿನ್ನಿಗೋಳಿ ಪರಿಸರದ ಪೊಲೀಸ್ ಬೀಟ್ ಸಿಬ್ಬಂದಿಯಾದ ಯಶವಂತ ಕುಮಾರ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಕಿಶೋರ್​ ಅವರಿಗೆ ದೂರವಾಣಿ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ