Breaking News

ಲೋಕಾ ಇನ್ಸ್​ಪೆಕ್ಟರ್​ ಸಜೀವ ದಹನ

Spread the love

ಧಾರವಾಡ: ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರು ಧಗಧಗ ಹೊತ್ತಿ ಉರಿದ ಹಿನ್ನೆಲೆಯಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.

ಹಾವೇರಿ ಲೋಕಾಯುಕ್ತ ಇನ್ಸ್​ಪೆಕ್ಟರ್ ಪಂಚಾಕ್ಷರಯ್ಯ​ ಸಾಲಿಮಠ ಅವರು ಅಪಘಾತದಲ್ಲಿ ಸಜೀವ ದಹನವಾಗಿದ್ದು, ಕಾರ್​​ನಲ್ಲಿಯೇ ಅವರ ದೇಹ ಹೊತ್ತಿ ಉರಿದಿದೆ. ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಕಾರು ಹೊರಟಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ಸಂಭವಿದೆ ಎಂದು ಶಂಕಿಸಲಾಗಿದೆ. ಡಿಕ್ಕಿ ರಭಸಕ್ಕೆ I20 ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.ಗದಗದಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿ ಮಾಡಲು ಇನ್ಸ್​​ಪೆಕ್ಟರ್​ ಸಾಲಿಮಠ​ ಹುಬ್ಬಳ್ಳಿ ಮಾರ್ಗವಾಗಿ ತಮ್ಮ ಕಾರಿನಲ್ಲಿ ತೆರಳುತ್ತಿದ್ದರು. ಈ ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ