ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.
ಕಾರಾಗೃಹದಲ್ಲಿರುವ 862 ಕೈದಿಗಳ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೆರವಾಗುವ ನಿಟ್ಟಿನಲ್ಲಿ ನಾಳೆ ಮಕ್ಕಳ ಕಲ್ಯಾಣ ಸಮಿತಿ,
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರಾಗೃಹದ ಅಧೀಕ್ಷಕರು ಸೇರಿ ಸಭೆ ನಡೆಸುವ ಮೂಲಕ ಪ್ರತಿಯೊಬ್ಬ ಕೈದಿಯ 18 ವರ್ಷದ ಒಳಗಿನ ಮಕ್ಕಳ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.
ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಡಾ. ಜಗದೀಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪರ್ವೀನ್, ಕಾರಾಗೃಹ ಅಧೀಕ್ಷಕರು ಹಾಗೂ ಇತರರಿದ್ದರು.
Laxmi News 24×7