Breaking News

ಧಾರವಾಡದಲ್ಲಿ ಯುವತಿ ಆತ್ಮಹತ್ಯೆ: ಅಪಪ್ರಚಾರ ಮಾಡದಂತೆ ಕಮಿಷನರ್ ಎಚ್ಚರಿಕೆ

Spread the love

ಹುಬ್ಬಳ್ಳಿ: ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿ ಸಮೀಪ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಳನ್ನು ಬಳ್ಳಾರಿ ಜಿಲ್ಲೆಯ ಬಿ ಕಗ್ಗಲ್ ಗ್ರಾಮದ‌ ಪಲ್ಲವಿ (24) ಎಂದು ಗುರುತಿಸಲಾಗಿದೆ.

ಈ ಯುವತಿ ಕಳೆದ ಕೆಲ ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಗಾಗಿ ಧಾರವಾಡದಲ್ಲಿ ಇದ್ದರು. ಇತ್ತೀಚೆಗೆ ಧಾರವಾಡದಲ್ಲಿ ಯುವಕ‌, ಯುವತಿಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದರು.

ಆದರೆ ಇಂದು ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದು, ಶವಪರೀಕ್ಷೆ ಕಿಮ್ಸ್ ಆಸ್ಪತ್ರೆಯಲ್ಲಿ ನಡೆಯಿತು. ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಶಶಿಕುಮಾರ್, “ವಿದ್ಯಾರ್ಥಿನಿ ವೈಯಕ್ತಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್​​ನೋಟ್ ಸಿಕ್ಕಿದೆ. ಆರೋಗ್ಯ ಸಮಸ್ಯೆ ಹಾಗೂ ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ನಾವು ಅವರ ಕುಟುಂಬದ ಜೊತೆಯೂ ಮಾತನಾಡಿದ್ದೇವೆ. ಅವರೂ ಕೂಡ ಆರೋಗ್ಯ ಸಮಸ್ಯೆ ಹಾಗೂ ಕೌಟುಂಬಿಕ ಸಮಸ್ಯೆ ಇರುವುದನ್ನು ಒಪ್ಪಿಕೊಂಡಿದ್ದಾರೆ. ಯುವತಿಯಾದ ಕಾರಣ ಡೆತ್ ನೋಟ್​ನಲ್ಲಿನ ಯಾವುದೇ ವಿಷಯವನ್ನು ಬಹಿರಂಗಪಡಿಸುವುದಿಲ್ಲ. ಎಲ್ಲ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ” ಎಂದರು.


Spread the love

About Laxminews 24x7

Check Also

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿ ಯತ್ನಿಸಿದ ಪತಿ

Spread the love ಬೇಡವೆಂದರೂ ಪತ್ನಿಯನ್ನು ತವರಿಗೆ ಕರೆದೊಯ್ದ ತವರಿನವರು ಪತ್ನಿ ಸೇರಿದಂತೆ ತವರು ಮನೆಯವರಿಗೆ ಪೆಟ್ರೋಲ್ ಸುರಿದು ಬೆಂಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ