ಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಸರ್ಕಾರದಿಂದ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ” ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೋರ್ಟ್ ಆದೇಶ ಮಾಡಿರುವುದು ಸರಿ ಇದೆ. ಈಗ ಇರುವ ಶಿಕ್ಷಕರು 20ರಿಂದ 30 ವರ್ಷಗಳ ಹಿಂದೆ ನೇಮಕಗೊಂಡವರು. ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆಂದು ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು” ಎಂದರು.
Laxmi News 24×7