Breaking News

ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ

Spread the love

ಬೆಂಗಳೂರು -ವಿಜಯಪುರ ರೈಲು ಸಂಚಾರಕ್ಕೆ ಹೊಸ ದಿಕ್ಕು! : ಸಚಿವ ಎಂ.ಬಿ.ಪಾಟೀಲ
ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ ಎಂದು ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಸಚಿವರು ಬೆಂಗಳೂರು– ವಿಜಯಪುರ ರೈಲುಗಳನ್ನು ಹುಬ್ಬಳ್ಳಿ–ಗದಗ ಬೈಪಾಸ್ ಮೂಲಕ ಓಡಿಸಲು ನಡೆದ ನಮ್ಮ ಪ್ರಯತ್ನಕ್ಕೆ ಮೊದಲ ಯಶಸ್ಸು ದೊರೆತಿದೆ.
ಈ ಹೊಸ ಮಾರ್ಗದ ಮೂಲಕ ಒಂದು ವಿಶೇಷ ರೈಲು ಯಶಸ್ವಿಯಾಗಿ ಓಡಿದೆ, ಇದರಿಂದ ಎಂಜಿನ್ ಬದಲಾವಣೆ ತಪ್ಪಿದ್ದು ಸಮಯ ಉಳಿತಾಯವಾಗಿದೆ ಎಂದಿದ್ದಾರೆ. ಬಾಗಲಕೋಟೆ–ವಿಜಯಪುರದ ಎಲ್ಲ ರೈಲುಗಳನ್ನು ಈ ಬೈಪಾಸ್ ಮೂಲಕ ಓಡಿಸಿದರೆ, ಪ್ರಯಾಣದ ಸಮಯವನ್ನು 14 ರಿಂದ 10 ಗಂಟೆಗಳಿಗೆ ಇಳಿಸಬಹುದು.
ಜೊತೆಗೆ ಪ್ರಯಾಣ ದರವೂ ಕಡಿಮೆಯಾಗಲಿದೆ. ಇದನ್ನು ಸಾಧಿಸಲು ಮೈಸೂರು– ಪಂಡರಪುರ ಎಕ್ಸ್ಪ್ರೆಸ್ ಅನ್ನು ಶಾಶ್ವತವಾಗಿ ಈ ಬೈಪಾಸ್ ಮೂಲಕ ಓಡಿಸಬೇಕು. ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಕಾಯಂ ಆಗಿ ಓಡಿಸಬೇಕು. ಕೇಂದ್ರ ರೈಲ್ವೆ ಸಚಿವರಿಗೆ ಈ ಬೇಡಿಕೆಯನ್ನು ಮುಂದಿರಿಸಲಾಗಿದೆ ಎಂದು ತಿಳಿಸಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ