Breaking News

ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆ

Spread the love

ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹುಬ್ಬರವಾಡಿ, ಬೂದಿಹಾಳ,May be an image of one or more people
ಮೇಖಳಿ ಹಾಗೂ ಮಾಡಲಗಿ ಗ್ರಾಮಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಿದರು.No photo description available.
ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿದ್ದ ರಾಯಬಾಗ ತಾಲೂಕಿನ 19 ಗ್ರಾಮಗಳಿಗೆ ಈ ಯೋಜನೆ ಜಾರಿಗೊಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶಗಳ ಕೃಷಿ, ಕುಡಿಯುವ ನೀರು ಮತ್ತು ಪರಿಸರಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು
ಈ ಸಂದರ್ಭದಲ್ಲಿ ಗ್ರಾಮಸ್ಥರು ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿ ಸಂತಸ ವ್ಯಕ್ತಪಡಿಸಿದರು. ಜೊತೆಗೆ ನನ್ನನ್ನು ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದರು.May be an image of car, motorcycle, jeep and text that says "04GA0164"
ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ, ಮುಖಂಡರಾದ ಅಮಿತ ಘಾಟಗೆ ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಭಟ್ಕಳ ಸಿಪಿಐ, ಹೆಡ್ ಕಾನ್ಸ್​ಟೇಬಲ್ ಅಮಾನತು

Spread the loveಕಾರವಾರ: ಕುಡಿದು ವಾಹನ ಚಲಾಯಿಸಿದ ಪ್ರಕರಣ, ಭ್ರಷ್ಟಾಚಾರ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಭಟ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ