Breaking News

ಸುಮಾರು 10 ಸಾವಿರ ಕುಟುಂಬಗಳಿಗೆ 16 ದಿನಗಳವರೆಗೆ ದಿನಬಿಟ್ಟು ದಿನ ಹಾಲಿನ ಪೂರೈಕೆಯಾಗಲಿದೆ:ಗಣೇಶ ಹುಕ್ಕೇರಿ

Spread the love

ಚಿಕ್ಕೋಡಿ – ಚಿಕ್ಕೋಡಿ ಪಟ್ಟಣದಲ್ಲಿ ಕೊರೋನಾ ಈವರೆಗೂ ಕಾಣಿಸದಿದ್ದರೂ, ಮುಂದಿನ ದಿನಗಳಲ್ಲಿ ಅಪಾಯ ಬರಬಾರದೆನ್ನುವ ಕಾರಣಕ್ಕೆ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳಲಾಗಿದೆ.
ಪಟ್ಟಣದಲ್ಲಿ 8 ದಿನಗಳ ಕಾಲ ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ವಯಂ ಲಾಕ್ ಡೌನ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಕಾಶ  ಹುಕ್ಕೇರಿ ಮತ್ತು ಶಾಸಕ ಗಣೇಶ ಹುಕ್ಕೇರಿ ತಾವೇ  ಸ್ವತಃ  8 ದಿನಗಳ ಕಾಲ ಪಟ್ಟಣದ ಎಲ್ಲ ಜನರಿಗೂ ಹಾಲನ್ನು ಉಚಿತವಾಗಿ ಪೂರೈಸಲು ನಿರ್ಧರಿಸಿದ್ದಾರೆ.
ಪಟ್ಟಣದ ಸುಮಾರು 10 ಸಾವಿರ ಕುಟುಂಬಗಳಿಗೆ 16 ದಿನಗಳವರೆಗೆ ದಿನಬಿಟ್ಟು ದಿನ ಹಾಲಿನ ಪೂರೈಕೆಯಾಗಲಿದೆ. ಅಂದರೆ 8 ದಿನ ಪ್ರತಿ ಕುಟುಂಬಕ್ಕೆ ಹಾಲು ಸಿಗಲಿದೆ.
  “ಹೊರಗಡೆ ಬಂದಾಗ ಕಡ್ಡಾಯವಾಗಿ  ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಗಣೇಶ ಹುಕ್ಕೇರಿ ಮನವಿ ಮಾಡಿದ್ದಾರೆ.

Spread the love

About Laxminews 24x7

Check Also

ಏತ ನೀರಾವರಿ ಯೋಜನೆಗಳ ಕಾರ್ಯಕ್ಷಮತೆಯ ಅಧ್ಯಯನ ಸಮಿತಿ ತಂಡದಿಂದ ಮಹಾಲಕ್ಷ್ಮಿ ಎತ್ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ

Spread the love ಚಿಕ್ಕೋಡಿ:ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮುಖಾಂತರ ರೈತರಿಗೆ ನೀರು ಸಿಗಬೇಕು ಎಂದು ಶಾಸಕರಾದ ಗಣೇಶ್ ಹುಕ್ಕೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ