Breaking News

ಸಿದ್ದರಾಮಯ್ಯ ಸಿಎಂ ಆಗಿ ದಾಖಲೆ ಮಾಡುವುದು ಮುಖ್ಯವಲ್ಲ, ಎಷ್ಟರಮಟ್ಟಿಗೆ ಜನಪರ ಆಡಳಿತ ನೀಡಿದ್ದಾರೆಂಬುದು ಮುಖ್ಯ: ಜಗದೀಶ್​ ಶೆಟ್ಟರ್

Spread the love

ಹುಬ್ಬಳ್ಳಿ: ದೇವರಾಜ ಅರಸು ಅವರು ಎರಡು ಅವಧಿ ಗ್ಯಾಪ್ ಇಲ್ಲದೇ ಸಿಎಂ ಆಗಿ ದಾಖಲೆ ಮಾಡಿದರು. ಆದರೆ, ಸಿದ್ದರಾಮಯ್ಯನವರು ಸತತ ಎರಡು ಅವಧಿ ಸಿಎಂ ಆಗಿಲ್ಲ, ಗ್ಯಾಪ್ ಇದೆ ಎಂದು ಮಾಜಿ‌ ಸಿಎಂ ಹಾಗೂ ಸಂಸದ ಜಗದೀಶ್​ ಶೆಟ್ಟರ್​ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾಖಲೆ ಮಾಡುವುದು ಮುಖ್ಯವಲ್ಲ. ಜನಪರ ಆಡಳಿತ ಎಷ್ಟರಮಟ್ಟಿಗೆ ನೀಡಿದರು ಅನ್ನೋದು ಮುಖ್ಯ. ಈಗಿನ ಸಿದ್ದರಾಮಯ್ಯನವರ ಅವಧಿಯಲ್ಲಿ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಸಿದ್ದರಾಮಯ್ಯನವರು ಈಗ ಅಡಳಿತದ ಮೇಲಿನ ಹಿಡಿತ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಆರ್ಥಿಕ ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಜನಪರ ಯೋಜನೆಗಳಿಗೆ ಅನುದಾನ ಇಲ್ಲ, ಗುತ್ತಿಗೆದಾರರ ಬಿಲ್ ಬಾಕಿ ಉಳಿದಿವೆ. ಕೇಂದ್ರ ಸರ್ಕಾರಗಳ ಯೋಜನೆಗೆ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ