Breaking News

ಗ್ರಾ.ಪಂ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಯಿಂದ ಯಡವಟ್ಟು; ಪೋಸ್ಟ್ ಡಿಲೀಟ್ ಮಾಡಿದರೂ ವೈರಲ್ ಆಯ್ತು ಚಿತ್ರ

Spread the love

ವಿಜಯಪುರ: ಈ ಪ್ರಕರಣ ಯುವ ರಾಜಕಾರಣಿಗಳು ಮತ್ತು ಪೊಲೀಸರಿಗೆ ಒಂದು ಪಾಠ. ಯಾರು ಏನೆಲ್ಲ ಮಾಡಬಾರದು ಎಂಬುದಕ್ಕೆ ಹೇಳಿ ಮಾಡಿಸಿದಂತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ತನ್ನ ಬೆಂಬಲಿಗರೊಂದಿಗೆ ಅತೀ ಹುರುಪಿನಿಂದ ಮಾಡಿದ ಯಡವಟ್ಟು ಈಗ ಪೊಲೀಸ್ ಠಾಣೆಯ ಮಹಿಳಾ ಪಿಎಸ್​ಐ ಮತ್ತು ಪೊಲೀಸ್ ಕಾನ್ಸ್​ಟೆಬಲ್ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಇದಕ್ಕೂ ಮಿಗಿಲಾಗಿ ತಮ್ಮ ಕೃತ್ಯವನ್ನು ಫೇಸ್ ಬುಕ್ ಮೂಲಕ ಜಗಜ್ಜಾಹಿರು ಮಾಡಿ ನಂತರ ಪೋಸ್ಟ್ ನ್ನು ಡಿಲೀಟ್ ಮಾಡಿದರೂ ಆ ಒಂದು ಪೋಸ್ಟ್ ಈಗ ಸಖತ್ ವೈರಲ್ ಆಗಿದೆ.

ಅಷ್ಟಕ್ಕೂ ಆಗಿದ್ದೇನೆಂದರೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವಿಗೆ ಸಹಕರಿಸಿದ ಪಿಎಸ್​ಐ ಮತ್ತು ಪೊಲೀಸ್ ಪೇದೆಯನ್ನು ಅಭ್ಯರ್ಥಿ ಮತ್ತು ಬೆಂಬಲಿಗರು ಪೊಲೀಸ್ ಠಾಣೆಗೆ ತೆರಲಿ ಸನ್ಮಾನಿಸಿ ಗೌರವಿಸಿದ ಘಟನೆ ಇದಾಗಿದೆ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳವಾಟ ಗ್ರಾಮದ ಬಸನಗೌಡ ಸಾಸನೂರ ಆಯ್ಕೆಯಾಗಿದ್ದಾರೆ. ಈ ಖುಷಿಯ ಹಿನ್ನೆಲೆಯಲ್ಲಿ ಬಸನಗೌಡ ಸಾಸನೂರ ತಮ್ಮ ಬೆಂಬಲಿಗರೊಂದಿಗೆ ತಾಳಿಕೋಟೆ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಅಲ್ಲದೇ, ಅಲ್ಲಿನ ಮಹಿಳಾ ಪಿಎಸ್​ಐ ಗಂಗೂಬಾಯಿ ಜಿ. ಬಿರಾದಾರ ಅವರಿಗೆ ಹಾರ ಹಾಕಿ ಸನ್ಮಾನಿಸಿದ್ದಾರೆ. ತಾವು ಗೆದ್ದಿದ್ದಕ್ಕಾಗಿ ಕೃತಜ್ಞತೆಯನ್ನೂ ಸಲ್ಲಿಸಿದ್ದಾರೆ.  ಆಗ ಪ್ರತಿಯಾಗಿ ಪಿಎಸ್​ಐ ಅವರು ವಿಜಯೀ ಅಭ್ಯರ್ಥಿಗೆ ಸಿಹಿ ತಿನ್ನಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ