Breaking News

ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ

Spread the love

ಹೈದರಾಬಾದ್‌: ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ನವದೆಹಲಿಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಭಾನುವಾರ ರಾತ್ರಿ 9 ಗಂಟೆಗೆ ಸುಮಾರಿಗೆ ತೆಲಂಗಾಣದ ವಿಕರಾಬಾದ್‌ ಜಿಲ್ಲೆ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕೊ ಪೈಲೆಟ್‌ ರೈಲು ಎಂಜಿನಲ್ಲಿ ಬೆಂಕಿ ಉರಿಯುವುದನ್ನು ಗಮನಿಸಿದ ತಕ್ಷಣವೇ ರೈಲನ್ನು ನಿಲ್ಲಿಸಿದ್ದಾರೆ. ಕೂಡಲೇ ಬೋಗಿಗಳಿಂದ ಎಂಜಿನ್‌ನನನ್ನು ಬೇರ್ಪಡಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ