ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್ಐಆರ್ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.