Breaking News
Home / ಹುಬ್ಬಳ್ಳಿ / ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

Spread the love

ಧಾರವಾಡ, ಜನವರಿ 6: ಧಾರವಾಡ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದ ಆರೋಪದಡಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ.

ಬುಧವಾರದಂದು ಧಾರವಾಡ ಹೈಕೋರ್ಟ್ ನಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ಅಷ್ಟೆ ಅಲ್ಲ ಇಂದು ಜಾಮೀನು ಸಿಗುವ ನಿರೀಕ್ಷೆ ಕೂಡ ಅವರ ಮಾಜಿ ಸಚಿವರ ಅಭಿಮಾನಿಗಳಿಗೆ ಇತ್ತು.

 

ಆದರೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರಿಗೆ ಯಾಕೆ ಜಾಮೀನು ನೀಡಬಾರದು ಎನ್ನುವ ಕುರಿತು ತಕರಾರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಾರಕ್ಕೆ ಮುಂದೂಡಲಾಯಿತು.

ಸದ್ಯಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲೆ ಇದ್ದಾರೆ. ಅವರು ಶೀಘ್ರ ಬಿಡುಗಡೆಯಾಗಲಿ ಎಂದು ಅವರ ಅಭಿಮಾನಿಗಳು ಮತ್ತು ಬಂಧುಗಳು ಕಳೆದ ಒಂದು ವಾರದಿಂದ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆ ಹಮ್ಮಿಕೊಂಡಿದ್ದರು.


Spread the love

About Laxminews 24x7

Check Also

ಧಾರವಾಡ: ಮನೆಯೊಂದರಲ್ಲಿ ಕಂತೆ ಕಂತೆ ಹಣ ಪತ್ತೆ; ಸುಮಾರು ₹ 18 ಕೋಟಿ?

Spread the love ಧಾರವಾಡ: ನಗರದ ನಾರಾಯಣಪುರ ಮುಖ್ಯರಸ್ತೆಯ ಆರ್ನಾ ರೆಸಿಡೆನ್ಸಿಯ ಮೂರನೇ ಅಂತಸ್ತಿನ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಚೀಲ‌ಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ