Breaking News

ಸಿದ್ದರಾಮಯ್ಯ, ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು – ಮತ್ತೆ ಕುಟುಕಿದ ಹಳ್ಳಿ ಹಕ್ಕಿ

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್‍ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್‍ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ವಾಗ್ದಾಳಿ ಹೇಳಿದ್ದಾರೆ.
ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು ಜೆಡಿಎಸ್‍ನಿಂದ ಸಿದ್ದರಾಮಯ್ಯರವರನ್ನು ಹೊರ ಹಾಕಿದರು. ಬಳಿಕ ಕಾಂಗ್ರೆಸ್‍ಗೆ ಬಂದರು ಆಗ ನಾವು ಹೋರಾಟ ಮಾಡಿದ್ದೆವು. ನಮ್ಮೆಲ್ಲರಿಂದ ಅವರು ಸಿಎಂ ಆದರು. ಅಹಿಂದ ಅವರು ಕಟ್ಟಿದ್ರಾ? ಜಿಲ್ಲೆ ತಿರುಗಿ ಮುಖುಡಪ್ಪ, ರೇವಣ್ಣ ಸಂಘಟನೆ ಮಾಡಿದರು. ಸಿದ್ದರಾಮಯ್ಯನವರು ಬಂದು ಭಾಷಣ ಮಾಡಿದರು ಅಷ್ಟೇ. ನೀವು ಸಿಎಂ ಆದ ಮೇಲೆ ಅಹಿಂದ ಏನಾಯ್ತು? ಸಿದ್ದರಾಮಯ್ಯನವರೆ ಸಿಎಂ ಆದ ಮೇಲೆ ಅಹಿಂದವನ್ನು ಮರೆತರು. ನಾವೆಲ್ಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಸಹ ಸಿದ್ದರಾಮಯ್ಯ ಅಹಿಂದ ಸಂಘಟನೆಗೆ ಬೆಂಬಲ ಕೊಟ್ಟಿದ್ದೇವು. ನಾವೆಲ್ಲ ಬೆಂಬಲ ಕೊಟ್ಟಿದ್ದರಿಂದ ಅಂದು ಅಹಿಂದ ಸಂಘಟನೆ ಯಶಸ್ವಿ ಆಯ್ತು ಎಂದರು.
ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು ಜೆಡಿಎಸ್‍ನಿಂದ ಸಿದ್ದರಾಮಯ್ಯರವರನ್ನು ಹೊರ ಹಾಕಿದರು. ಬಳಿಕ ಕಾಂಗ್ರೆಸ್‍ಗೆ ಬಂದರು ಆಗ ನಾವು ಹೋರಾಟ ಮಾಡಿದ್ದೆವು. ನಮ್ಮೆಲ್ಲರಿಂದ ಅವರು ಸಿಎಂ ಆದರು. ಅಹಿಂದ ಅವರು ಕಟ್ಟಿದ್ರಾ? ಜಿಲ್ಲೆ ತಿರುಗಿ ಮುಖುಡಪ್ಪ, ರೇವಣ್ಣ ಸಂಘಟನೆ ಮಾಡಿದರು. ಸಿದ್ದರಾಮಯ್ಯನವರು ಬಂದು ಭಾಷಣ ಮಾಡಿದರು ಅಷ್ಟೇ. ನೀವು ಸಿಎಂ ಆದ ಮೇಲೆ ಅಹಿಂದ ಏನಾಯ್ತು? ಸಿದ್ದರಾಮಯ್ಯನವರೆ ಸಿಎಂ ಆದ ಮೇಲೆ ಅಹಿಂದವನ್ನು ಮರೆತರು. ನಾವೆಲ್ಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಸಹ ಸಿದ್ದರಾಮಯ್ಯ ಅಹಿಂದ ಸಂಘಟನೆಗೆ ಬೆಂಬಲ ಕೊಟ್ಟಿದ್ದೇವು. ನಾವೆಲ್ಲ ಬೆಂಬಲ ಕೊಟ್ಟಿದ್ದರಿಂದ ಅಂದು ಅಹಿಂದ ಸಂಘಟನೆ ಯಶಸ್ವಿ ಆಯ್ತು ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Spread the loveಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ