Breaking News

ಒಟಿಟಿಯಲ್ಲಿ ರಿಲೀಸ್‌ ಮಾಡಿದ್ರೆ ಲಾಭವಾಗುತ್ತಾ – ಸಭೆ ನಡೆಸಿದ ಕನ್ನಡ ಬಿಗ್‌ ಬಜೆಟ್‌ ನಿರ್ಮಾಪಕರು

Spread the love

ಬೆಂಗಳೂರು: ಕೋವಿಡ್‌ 19 ಬಂದ ನಂತರ ಚಿತ್ರೋದ್ಯಮಕ್ಕೆ ಬಲವಾದ ಪೆಟ್ಟು ಬಿದ್ದಿದೆ. ನಿಧಾನವಾಗಿ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಆರಂಭಗೊಂಡಿದ್ದರೂ ಚಲನ ಚಿತ್ರ ಮಂದಿರಕ್ಕೆ ಜನ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದೆ ಚಿತ್ರಗಳನ್ನು ಮಂದಿರಗಳಲ್ಲಿ ರಿಲೀಸ್‌ ಮಾಡಬೇಕೇ? ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲು ಸ್ಯಾಂಡಲ್‌ವುಡ್‌ ಚಿತ್ರ ನಿರ್ಮಾಪಕರು ಇಂದು ಸಭೆ ನಡೆಸಿದ್ದಾರೆ.

ಕೊರೊನಾದಿಂದಾಗಿ ಬಿಡುಗಡೆಯಾಗಬೇಕಿದ್ದ ಬಿಗ್‌ ಬಜೆಟ್‌ ಸಿನಿಮಾಗಳು ಈ ವರ್ಷಕ್ಕೆ ಮುಂದೂಡಿಕೆಯಾಗಿವೆ. ಈ ನಡುವೆ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೋವಿಡ್‌ 19 ನಿಂದಾಗಿ ಜನ ಸಿನಿಮಾ ಮಂದಿರದತ್ತ ಬರುವುದು ಕಡಿಮೆಯಾಗಿದೆ. ಈಗ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದ್ದು ನಿರ್ಮಾಪಕರಿಗೆ ಸಂಕಷ್ಟ ತಂದಿದೆ. ಈ ಕಾರಣಕ್ಕೆ ಮುಂದೆ ಸಿನಿಮಾವನ್ನು ಹೇಗೆ ಬಿಡುಗಡೆ ಮಾಡಬೇಕು? ಒಟಿಟಿಯಲ್ಲಿ ಬಿಡುಗಡೆ ಮಾಡಿದರೆ ಹೇಗೆ? ಈ ಎಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಬಿಗ್‌ ಬಜೆಟ್‌ ಸಿನಿಮಾ ನಿರ್ಮಾಪಕರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ.

Spread the loveಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘಟನೆ. ಜಿಲ್ಲಾಧಿಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ