Breaking News

ನಿಂತಿದ್ದ ಲಾರಿಗೆ ಒಮನಿ ಡಿಕ್ಕಿ ಕರೆ ಮಾಡಿ ಸುಮಾರು ಗಂಟೆಗಳ ಆದ್ರೂ ಸ್ಪಂದಿಸದ ಆಂಬ್ಯುಲೆನ್ಸ್ ಮೂವರು ಸಾವಿಗೀಡಾಗಿರುವ ದುರ್ಘಟನೆ

Spread the love

ಚಿತ್ರದುರ್ಗ: ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ