ಕೋಲಾರ: ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ ಎಂದು ಸಚಿವ ಸಂಪುಟ ವಿಸ್ತರಣೆ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಬೇಕು. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಇನ್ನೂ ಮುನಿರತ್ನ, ಆರ್.ಶಂಕರ್ ಹಾಗೂ ಎಂಟಿಬಿಗೆ ಸಚಿವ ಸ್ಥಾನ ಸಿಗಬೇಕಿದೆ, ಸಿಗುತ್ತೆ. ವಿಶ್ವನಾಥ್ ಅವರಿಗೂ ಸಿಗುತ್ತೆ ಎಂದರು.
