ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಹೆಬ್ಬಾಳ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ, ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು. ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ, ಹಾಗೂ ತಾಲೂಕು, ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಮುಖಂಡರು ಇದ್ದರು.