Home / Uncategorized / ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ.

ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ.

Spread the love

ರಾಯಚೂರು: ಕಳೆದ ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ. ಬಿಸಿಲನಾಡು ರಾಯಚೂರು ಈ ವರ್ಷ ಚಳಿ ಮಳೆಯನ್ನೇ ಹೆಚ್ಚು ಕಾಣುತ್ತಿದೆ. ಆದರೆ ಈಗ ಬದಲಾಗಿರುವ ವಾತಾವರಣ ಕೆಲ ಬೆಳೆಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ.

ಉತ್ತರ ಭಾರತದಲ್ಲಿನ ಚಳಿಗಾಲದ ಮಳೆ, ಪಶ್ಚಿಮದ ಗಾಳಿ, ಹಿಂದೂ ಮಹಾಸಾಗರದಿಂದ ಸುಳಿಗಾಳಿ ಬರುವುದು ವಾತಾವರಣದಲ್ಲಿ ಬದಲಾವಣೆ ತಂದಿದೆ. ಬಂಗಾಳ ಕೊಲ್ಲಿ ಸಮುದ್ರ ಮೇಲ್ಮೈನಲ್ಲಿನ ಸುಳಿಗಾಳಿಯೂ ರಾಜ್ಯದಲ್ಲಿನ ತುಂತುರು ಮಳೆಗೆ ಕಾರಣವಾಗಿದೆ. ಚಳಿಗಾಲದಲ್ಲಿ ಮಳೆ ಬರುವುದು ಅಚ್ಚರಿಯನ್ನ ಮೂಡಿಸುವುದರ ಜೊತೆ ಕೆಲ ಆತಂಕಗಳನ್ನೂ ಸೃಷ್ಟಿಸಿದೆ. ಮನುಷ್ಯರಿಗೆ ನೆಗಡಿ, ಜ್ವರದಂತ ಸಮಸ್ಯೆ ಹೆಚ್ಚು ಮಾಡಿದರೆ ಬೆಳಗಳ ಇಳುವರಿ ಮೇಲೆ ನೇರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಕಡಲೆ, ತೊಗರಿ ಬೆಳೆ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯನ್ನ ಕೃಷಿ ವಿಜ್ಞಾನಿಗಳು ತಿಳಿಸಿದ್ದಾರೆ.
 ಕಡಲೆ ಬೆಳೆಯ ಮೇಲಿನ ಹುಳಿ ಮ್ಯಾಲಿಕ್ ಆಸಿಡ್ ಮಳೆಗೆ ತೊಳೆದುಕೊಂಡು ಹೋಗಿ ಇಳುವರಿ ಕಡಿಮೆಯಾಗುತ್ತದೆ ಅಂತ ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನೂ ತೊಗರಿ, ಹತ್ತಿ, ಮೆಣಸಿನಕಾಯಿ ಇಳುವರಿ ಕೈಗೆ ಬರುವ ಹಂತದಲ್ಲಿ ಹಾಳಾಗುವ ಭೀತಿ ಎದುರಾಗಿದೆ. ಬಿಡಿಸುವ ಹಂತದಲ್ಲಿರುವ ಹತ್ತಿ ಒದ್ದೆಯಾದರೆ ಬೆಲೆ ಸಿಗುವುದು ಕಷ್ಟವಿದೆ. ಈಗಾಗಲೇ ಬಿಡಿಸಿ ಜಮೀನಿನಲ್ಲಿ ಒಣಗಲು ಹಾಕಿರುವ ಮೆಣಸಿನಕಾಯಿ ಬಣ್ಣವೇ ಬದಲಾಗುವ ಆತಂಕವಿದೆ ಅಂತ ರಾಯಚೂರು ಕೃಷಿ ವಿಜ್ಞಾನಗಳು ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಬಿ.ಕೆ.ದೇಸಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ