Breaking News

ಜನೇವರಿ 17 ರಂದು ಬೆಳಗಾವಿಗೆ ಅಮೀತ ಶಾ

Spread the love

ಬೆಳಗಾವಿ- ಬಿಜೆಪಿಯ ಚಾಣಕ್ಯರಂದೇ ಪ್ರಸಿದ್ಧಿ ಪಡೆದಿರುವ ಕೇಂದ್ರದ ಗೃಹ ಸಚಿವ ಅಮೀತ ಶಾ ಅವರು ಜನೇವರಿ 17 ರಂದು ಬೆಳಗಾವಿಗೆ ಆಗಮಿಸುತ್ತಿದ್ದು,ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಆಕಾಂಕ್ಷಿಗಳಲ್ಲಿ ಹೊಸ ಹುರುಪು ಬಂದಿದೆ

ಅಮೀತ ಶಾ ಅವರು ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಸಂಧರ್ಭದಲ್ಲಿ ಬೆಳಗಾವಿಗೆ ಆಗಮಿಸುತ್ತಿರುವದು ವಿಶೇಷವಾಗಿದ್ದು,ಅಂದು ಅವರು ಬೆಳಗಾವಿಯ ಬಿಜೆಪಿ ಅಭ್ಯರ್ಥಿಯನ್ನು ಫೈನಲ್ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಅಮೀತ ಶಾ ಅವರು ಬೆಳಗಾವಿಗೆ ಬಂದು ಹೋದ ಬಳಿಕ ಉಪ ಚುನಾವಣೆಯ ದಿನಾಂಕವೂ ಪ್ರಕಟವಾಗುತ್ತದೆ ಎಂದು ಹೇಳಲಾಗಿದ್ದು ಅಮೀತ ಶಾ ಅವರ ಬೆಳಗಾವಿಯ ಪ್ರವಾಸ ಬಿಜೆಪಿಯ ಅಗಣಿತ ಆಕಾಂಕ್ಷಿಗಳಲ್ಲಿ ಚೈತನ್ಯ ಮೂಡಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಲು ಬಿಜೆಪಿ ಟಿಕೆಟ್ ಗಾಗಿ ಭಾರೀ ಪೈಪೋಟಿ ನಡೆದಿದೆ.ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ 70 ಕ್ಕೂ ಹೆಚ್ಚು ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವದು ಬೆಳಗಾವಿ ಜಿಲ್ಲೆಯಲ್ಲಿ ಹೊಸ ದಾಖಲೆ ಸೃಷ್ಠಿಸಿದೆ.17 ರಂದು ಅಮೀತ ಶಾ ಬೆಳಗಾವಿಗೆ ಬಂದಾಗ ಟಿಕೆಟ್ ಫೈನಲ್ ಮಾಡಿಯೇ ಹೋಗ್ತಾರೆ,ಎನ್ನುವ ಸುದ್ಧಿ ಈಗ ಸಾಕಷ್ಟು ಪ್ರಚಾರ ಪಡೆದಿದೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೀಗೀದೆ….

1) ಡಾ. ರವಿ ಪಾಟೀಲ
2) ಸಂಜಯ ಪಾಟೀಲ
3) ಎಂ.ಬಿ ಝಿರಲಿ
4) ರಮೇಶ್ ಕತ್ತಿ
5)ವಿಶ್ವನಾಥ ಪಾಟೀಲ
6) ಜಗದೀಶ್
ಮೆಟಗುಡ್
7)ಅಮೀತ ಕೋರೆ
8) ರಾಜೀವ ಟೋಪಣ್ಣವರ
9) ಡಾ ಸೋನವಾಲಕರ
10) ಭಾರತಿ ಮಗದುಮ್
11) ಶಂಕರಗೌಡ ಪಾಟೀಲ112) ರುದ್ರಣ್ಣಾ ಚಂದರಗಿ ಸೇರಿದಂತೆ ಸುಮಾರು 70 ಕ್ಕೂ ಹೆಚ್ವು ಆಕಾಂಕ್ಷಿಗಳು ಬಿಜೆಪಿ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಸುರೇಶ ಅಂಗಡಿ ಕುಟುಂಬದ ಕುರಿತು ಎಲ್ಲ ನಾಯಕರ ಸಾಫ್ಟ್ ಕಾರ್ನರ್


Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ