Home / Uncategorized / ಬಿಎಸ್​ವೈ ಅವರನ್ನು ದೆಹಲಿಗೆ ಬರುವಂತೆ ಬುಲಾವ್​ ನೀಡಿದ್ದು, ರಾಜ್ಯ ಸಂಪುಟ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ.

ಬಿಎಸ್​ವೈ ಅವರನ್ನು ದೆಹಲಿಗೆ ಬರುವಂತೆ ಬುಲಾವ್​ ನೀಡಿದ್ದು, ರಾಜ್ಯ ಸಂಪುಟ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ.

Spread the love

ನವದೆಹಲಿ; ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಳೆದ ಒಂದೂವರೆ ವರ್ಷದಿಂದ ಮುಂದೂಡಲ್ಪಡುತ್ತಲೇ ಇದೆ. ಒಂದೆಡೆ ಸಚಿವಾಕಾಂಕ್ಷಿಗಳ ಸಂಖ್ಯೆ ಏರುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಹೈಕಮಾಂಡ್​ ಈವರೆಗೆ ಸಂಪುಟವನ್ನು ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರಿಗೆ ಅವಕಾಶ ನೀಡಿಲ್ಲ. ಪರಿಣಾಮ ಬಿಎಸ್​ವೈ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ. ಈ ನಡುವೆ ಕಳೆದ ವಾರ ಹೇಳಿಕೆ ನೀಡಿದ್ದ ವಿಧಾನ ಪರಿಷತ್​ ಸದಸ್ಯ ಆರ್​. ಶಂಕರ್​ ತಮಗೆ ಖಚಿತವಾಗಿ ಸಚಿವ ಸ್ಥಾನ ನೀಡುವುದಾಗಿ ಬಿಎಸ್​ವೈ ಮಾತು ನೀಡಿದ್ದಾರೆ ಎಂದು ತಿಳಿಸಿದ್ದರು. ಪರಿಣಾಮ ಸಂಕ್ರಾಂತಿ ಹಬ್ಬಕ್ಕೂ ಮುನ್ನವೇ ಈ ಬಾರಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದಕ್ಕೆ ಇಂಬು ನೀಡುವಂತೆ ಅಮಿತ್​ ಶಾ ಸ್ವತಃ ಇಂದು ಬಿಎಸ್​ವೈ ಅವರನ್ನು ದೆಹಲಿಗೆ ಬರುವಂತೆ ಬುಲಾವ್​ ನೀಡಿದ್ದು, ರಾಜ್ಯ ಸಂಪುಟ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ.


Spread the love

About Laxminews 24x7

Check Also

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the loveಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ