Breaking News

ಬಿಜೆಪಿ ದರಿದ್ರ ಸರ್ಕಾರ:ಸಿದ್ದರಾಮಯ್ಯ ಲೇವಡಿ

Spread the love

ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ ಜನ ವಿರೋಧ ಕಾಯಿದೆಗಳನ್ನು ಇಟ್ಟುಕೊಂಡು ಶೀಘ್ರದಲ್ಲೇ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಈ ವರ್ಷ ಸಂಘರ್ಷದ ವರ್ಷ. ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಜ. 18ರವರೆಗೂ ಪಕ್ಷದ ಕಾರ್ಯಕ್ರಮ ಇದೆ. ನಂತರ ಪಕ್ಷದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಇದಕ್ಕಾಗಿ ಜೈಲಿಗೆ ಹೋಗೋಕೂ ಸಿದ್ಧ. ಮೊದಲು ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ