Breaking News

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಮುಂದುವರೆದ ನಿರಾಸೆ

Spread the love

ಬೆಂಗಳೂರು: ಶಿಕ್ಷಕರ ಬಹು ದಿನಗಳ ಬೇಡಿಕೆಯಾಗಿದ್ದ ವರ್ಗಾವಣೆಗೆ ಕಾಲ ಕೂಡಿ ಬಂದಂತಿಲ್ಲ. ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣೆಯಾಗಿದ್ದ ಶಿಕ್ಷಕರ ವರ್ಗಾವಣೆಗೆ ಕೆಎಟಿ ತಡೆ ನೀಡಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ) ಅಧಿನಿಯಮ -2020 ರ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಕೆಎಟಿ ಆದೇಶ ಹೊರಡಿಸಿದೆ. ಇದರಿಂದಾಗಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯಾಗಿದ್ದ ಶಿಕ್ಷಕರಿಗೆ ವರ್ಗಾವಣೆ ನೀಡಲು ಮುಂದಾಗಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆಯಾದಂತಾಗಿದೆ.

ಫೆಬ್ರವರಿ 17 ರವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಸದಂತೆ ಕೆಎಟಿ ಕಲಬುರ್ಗಿ ಪೀಠ ಆದೇಶ ನೀಡಿದ್ದು, ಈ ಬಾರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಅನುಮಾನ ಎನ್ನಲಾಗಿದೆ. ಸರ್ಕಾರ ಶಿಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಸುಮಾರು 75 ಸಾವಿರ ಶಿಕ್ಷಕರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ವರ್ಗಾವಣೆ ನಡೆಸದಂತೆ ಕೆಎಟಿ ತೀರ್ಪು ನೀಡಿದ್ದು ಈ ಸಂಬಂಧ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ