Breaking News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗೋಕಾಕ ನಗರದ ಕೀರ್ತಿ ತಂದಿದ್ದಾನೆ. 

Spread the love

ಗೋಕಾಕ:   ಮದುವೆ, ಸಭೆ  ಸಮಾರಂಭಗಳಲ್ಲಿ ಅಡುಗೆ ಮಾಡುತ್ತ ಜೀವನೋಪಾಯ ಸಾಗಿಸುತ್ತಿದ್ದ ಅಡುಗೆ ಭಟ್ಟನ ಮಗ  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಶೇ 98. 16  ಅಂಕಪಡೆದು ಉತ್ತಮ ಸಾಧನೆ ಮಾಡಿ ಗೋಕಾಕ ನಗರದ ಕೀರ್ತಿ ತಂದಿದ್ದಾನೆ. 

ಮೂಡಬಿದರಿಯ ಆಳ್ವಾಸ ಕಾಲೇಜಿನಲ್ಲಿ  ಓದುತ್ತಿದ್ದ ಗೋಕಾಕದ  ಅನಿಲ ರಾಜು ಬನ್ನಿಶೆಟ್ಟಿ  ದ್ವಿತೀಯ  ಪಿಯುಸಿ  ವಿಜ್ಞಾನ ವಿಭಾಗದಲ್ಲಿ ಗಣಿತ, ಬಯೋಲಾಜಿ, ಹಿಂದಿ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆಯುವ ಮೂಲಕ   600 ಅಂಕಗಳ ಪೈಕಿ   589 ಮಾರ್ಕ್ಸ್ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ. 

ಈತ   ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಎಸ್ಎಸ್ ಎಲ್ ಪರೀಕ್ಷೆಯಲ್ಲಿಯೂ   625 ಕ್ಕೆ 617 ಮಾರ್ಕ್ಸ್  ಪಡೆದ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದ, ಎಸ್ಎಸ್ಎಲ್ ಸಿಯಲ್ಲಿ ಈತನ ಸಾಧನೆಯನ್ನು  ಗುರುತಿಸಿದ ಮೂಡಬಿದರೆ ಆಳ್ವಾಸ ಕಾಲೇಜು ಆಡಳಿತ ಮಂಡಿಳಿ ಉಚಿತ ಪ್ರವೇಶ ನೀಡಿ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ