Breaking News

ಕಲ್ಲಿದ್ದಲು ಗಣಿಗಾರಿಕೆಗೆ ಆನ್ ಲೈನ್ ಮೂಲಕ ಅನುಮತಿ ಒದಗಿಸುವ ಏಕ ಗವಾಕ್ಷಿ ಅನುಮೋದನೆ ಪಡೆಯುವ ವ್ಯವಸ್ಥೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ

Spread the love

ನವದೆಹಲಿ: ಕಲ್ಲಿದ್ದಲು ಗಣಿಗಾರಿಕೆಗೆ ಆನ್ ಲೈನ್ ಮೂಲಕ ಅನುಮತಿ ಒದಗಿಸುವ ಏಕ ಗವಾಕ್ಷಿ ಅನುಮೋದನೆ ಪಡೆಯುವ ವ್ಯವಸ್ಥೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.

ಈ ಕುರಿತು ಮಾತನಾಡಿದ ಅವರು ಕಲ್ಲಿದ್ದಲು ಕ್ಷೇತ್ರದಲ್ಲಿ ಅಪಾರ ಸಾಮರ್ಥ್ಯವಿದ್ದರೂ ಅದರ ಸದ್ಬಳಕೆ ಆಗುತ್ತಿರಲಿಲ್ಲ, ಇದೀಗ ಕಲ್ಲಿದ್ದಲು ಕ್ಷೇತ್ರದಲ್ಲಿ ಪಾರದರ್ಶಕತೆ ತರುವ ಮತ್ತು ಅದರ ಕ್ಷಮತೆಯನ್ನು ಹೆಚ್ಚಿಸುವ ಹಾಗೂ ಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶ್ರಮಿಸುತ್ತಿದ್ದು, ಈ ಏಕ ಗವಾಕ್ಷಿ ಯೋಜನೆ ಅದರ ಭಾಗವಾಗಿದೆ ಎಂದು ತಿಳಿಸಿದರು.

ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಗೆ ಕಲ್ಲಿದ್ದಲು ಕ್ಷೇತ್ರ ಅತಿ ದೊಡ್ಡ ಪಾಲು ನೀಡಲಿದೆ. ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಹೊಸಬರಿಗೂ ಅವಕಾಶ ಲಭಿಸುತ್ತಿದೆ. ಕಲ್ಲಿದ್ದಲು ಕ್ಷೇತ್ರದಲ್ಲಿ ಸಮಾನತೆ ಮೂಡುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ