Breaking News

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಪೊಲೀಸರು

Spread the love

ಬೆಂಗಳೂರು: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಸೂರ್ಯಸಿಟಿ ಪೊಲೀಸರು ಬೇಧಿಸಿದ್ದಾರೆ.

ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಅಲಿಯಾಸ್ ನಂಜಪ್ಪ ಹಾಗೂ ನರೇಶ್ ಅಲಿಯಾಸ್ ಜೋಗರಾಂನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ಮಷೀನ್ ಹಾಗೂ 6 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 100, 200 ಹಾಗೂ 500 ಮುಖಬೆಲೆಯ ನಕಲಿ ನೋಟುಗಳು ಇವೆ.

ವಂಚಕರು ಕಲರ್ ಪ್ರಿಂಟಿಂಗ್ ಮಷೀನ್ ಮೂಲಕ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದರು. ಸಂತೆ ಸೇರಿದಂತೆ ಗದ್ದಲ ಇರುತ್ತಿದ್ದ ಅಂಗಡಿಗಳಿಗೆ ನೋಟನ್ನು ನೀಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೂರ್ಯನಗರ ಠಾಣೆಯ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಭೀಕರ ಸರಣಿ ಅಪಘಾತಕ್ಕೆ 7 ಬಲಿ

Spread the loveಬೆಂಗಳೂರು: ಹೊರವಲಯ ಹೊಸಕೋಟೆ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿದೆ. ಕ್ಯಾಂಟರ್, ಬೈಕ್ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ