Breaking News
Home / ಜಿಲ್ಲೆ / ದಾವಣಗೆರೆ / ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? ರೇಣುಕಾಚಾರ್ಯ

ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? ರೇಣುಕಾಚಾರ್ಯ

Spread the love

ದಾವಣಗೆರೆ: ಮುಖ್ಯಮಂತ್ರಿಗಳಿಂದ ಈ ವರೆಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ಸಚಿವ ಸ್ಥಾನ ನೀಡದಿದ್ದರೆ ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ರೆಬೆಲ್ ಆಗುವ ಸುಳಿವು ನೀಡಿದ್ದಾರೆ.

ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗಬೇಕು ಎಂಬುದು ಜನರ ಅಪೇಕ್ಷೆ. ಸಿಎಂ ಅವರಿಂದ ಈವರೆಗೆ ಯಾವುದೇ ಕರೆ ಬಂದಿಲ್ಲ. ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕ, ಅವಕಾಶ ಕೊಡಲೇ ಬೇಕು ಎಂಬ ಬೇಡಿಕೆ ಇದೆ. ಸಚಿವ ಸ್ಥಾನದ ಬಗ್ಗೆ ಈ ವರೆಗೆ ಯಾವುದೇ ಮಾಹಿತಿ ಇಲ್ಲ. ಕಾದು ನೋಡುತ್ತೇನೆ, ಸಂಜೆವರೆಗೆ ಕಾದು ನಂತರ ಪ್ರತಿಕ್ರಿಯಿಸುತ್ತೇನೆ ಎಂದು ರೇಣುಕಾಚಾರ್ಯ ಅವರು ಸಂಜೆವರೆಗೆ ತಮ್ಮ ನಿರ್ಧಾರ ಕಾಯ್ದಿರಿಸಿದ್ದಾರೆ.

ಸಚಿವ ಸ್ಥಾನ ನೀಡದಿದ್ದಲ್ಲಿ ಸೂಕ್ತ ಕಾಲದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಸಾಮಾಜಿಕವಾಗಿ ಭೌಗೋಳಿಕವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತವಾದರೆ ನಮಗೆ ನೋವು ಆಗುತ್ತೆದೆ. ದಾವಣಗೆರೆ ಆರು ಜನ ಶಾಸಕರನ್ನು ಕೊಟ್ಟಿಲ್ವಾ, ಕೇವಲ ಬೆಂಗಳೂರು-ಬೆಳಗಾವಿಗೆ ಮಾತ್ರ ಸೀಮಿತವೇ? ಬೇರೆ ಜಿಲ್ಲೆಗಳು ಇಲ್ಲವೇ? ದಾವಣಗೆರೆಗೆ ಆನ್ಯಾಯವಾಗಿದೆ, ಭೌಗೋಳಿಕವಾಗಿ ಸಹ ಅನ್ಯಾಯವಾಗಿದೆ ಎಂದು ಸಿಎಂ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ

Spread the love ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ 20 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ