Breaking News
Home / Uncategorized / ಸಂಪುಟ ವಿಸ್ತರಣೆ ಬಳಿಕ ಸಚಿವರ ಖಾತೆ ಬದಲಾವಣೆ

ಸಂಪುಟ ವಿಸ್ತರಣೆ ಬಳಿಕ ಸಚಿವರ ಖಾತೆ ಬದಲಾವಣೆ

Spread the love

ಬೆಂಗಳೂರು,ಜ.13- ಸಂಪುಟ ವಿಸ್ತರಣೆ ಮಾತ್ರವೆಂದು ನಿಟ್ಟುಸಿರು ಬಿಟ್ಟಿದ್ದ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಬಿಜೆಪಿ ಹೈಕಮಾಂಡ್ ಅಘಾತ ನೀಡಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಳಿಕ ಸಚಿವರ ಖಾತೆ ಬದಲಾವಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಬಳಿಕ ತಮ್ಮ ಬಳಿ ಇರುವ ಖಾತೆಗಳನ್ನು ಹಂಚುವುದರೊಂದಿಗೆ ಹಲವು ಸಚಿವರ ಖಾತೆ ಬದಲಾವಣೆಗೂ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದು, ಪ್ರಮುಖವಾಗಿ ಹಿರಿಯ ಸಚಿವರ ಖಾತೆಗಳನ್ನು ಬದಲಾಯಿಸುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.ಬಿಜೆಪಿ ಸರ್ಕಾರ ರಚನೆಯಲ್ಲಿ ಕೈ ಜೋಡಿಸಿದವರಿಗೆ ಬಯಸಿದ ಖಾತೆಗಳನ್ನು ನೀಡುವುದು ಹಾಗೂ ಹಾಲಿ ಸಚಿವರಲ್ಲಿ ಕೆಲವರಿಗೆ ಹಂಚಿಕೆ ಮಾಡಲಾಗಿರುವ ಖಾತೆಗಳನ್ನು ಬದಲಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಲವು ಸಚಿವರು ತಮ್ಮ ಖಾತೆಗಳ ಬದಲಾವಣೆಗೆ ಬೇಡಿಕೆ ಇಟ್ಟಿರುವುದು ಕೂಡ ಯಡಿಯೂರಪ್ಪನವರು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗೃಹ ಇಲಾಖೆ ಬದಲು ಜಲಸಂಪನ್ಮೂಲ ಖಾತೆಗೆ ಬೇಡಿಕೆ ಇಟಿದ್ದಾರೆ. ಹಿಂದೆ ಜಲಸಂಪನ್ಮೂಲ ಸಚಿವರಾಗಿ ಅವರು ಖಾತೆ ನಿರ್ವಹಿಸಿದ್ದರು. ಆದರೆ, ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷ ಸೇರ್ಪಡೆ ಸಂದರ್ಭದಲ್ಲಿಯೇ ಜಲಸಂಪನ್ಮೂಲ ಇಲಾಖೆ ನೀಡುವುದಾಗಿ ಭರವಸೆ ನೀಡಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು.

ಹೀಗಾಗಿ ಜಲಸಂಪನ್ಮೂಲ ಖಾತೆ ಬಸವರಾಜ್ ಬೊಮ್ಮಾಯಿ ಅವರ ಕೈ ತಪ್ಪಿದೆ. ಈಗ ಯಡಿಯೂರಪ್ಪ, ಬೊಮ್ಮಾಯಿ ಅವರ ಗೃಹ ಖಾತೆ ಬದಲಿಸಿ, ಕಂದಾಯ ಇಲಾಖೆ ನೀಡುವ ಆಲೋಚನೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಕಂದಾಯ ಸಚಿವ ಅಶೋಕ್ ಅವರಿಗೆ ಮತ್ತೆ ಗೃಹ ಇಲಾಖೆ ಕೊಡುವ ಆಲೋಚನೆ ಹೊಂದಿದ್ದಾರೆ. ಆದರೆ ಮೊದಲಿನಿಂದಲೂ ಆರ್. ಅಶೋಕ್ ಬೆಂಗಳೂರು ಅಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದಾರೆ.

ಬೆಂಗಳೂರು ಶಾಸಕರಲ್ಲಿ ಅಸಮಾಧಾನ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿ ತಮ್ಮ ಬಳಿಯೇ ಇಟ್ಟುಕೊಳ್ಳಲಿದ್ದಾರೆ ಎಂಬ ಮಾಹಿತಿಯಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಇಂಧನ ಖಾತೆ ನೀಡುವ ಬಗ್ಗೆ ಸಿಎಂ ಒಲವು ಹೊಂದಿದ್ದಾರೆ. ಈಶ್ವರಪ್ಪ ಅವರ ಬಳಿ ಇರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ನೀಡುವ ಆಲೋಚನೆಯನ್ನು ಸಿಎಂ ಹೊಂದಿದ್ದಾರೆ ಎನ್ನಲಾಗುತ್ತಿದೆ. ಕೈಗಾರಿಕಾ ಖಾತೆಯನ್ನು ಹೊಸದಾಗಿ ಸಂಪುಟ ಸೇರುವವರಲ್ಲಿ ಯಾರಿಗಾದರೂ ಕೊಡಬೇಕು ಎನ್ನುವ ಲೆಕ್ಕಾಚಾರ ಮುಖ್ಯಮಂತ್ರಿಯವರದ್ದು ಎಂದು ಹೇಳಲಾಗುತ್ತಿದೆ.

ಸಂಪುಟ ವಿಸ್ತರಣೆಯ ನಂತರ ಸಚಿವ ಸುಧಾಕರ್ ಬಳಿ ಇರುವ ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಶಿವರಾಮ್ ಹೆಬ್ಬಾರ್ ಬಳಿ ಇರುವ ಸಕ್ಕರೆ ಖಾತೆಯನ್ನು ವಾಪಸ್ ಪಡೆದು ನೂತನ ಸಚಿವರಿಗೆ ಹಂಚಿಕೆ ಮಾಡಲು ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದಾರೆ.


Spread the love

About Laxminews 24x7

Check Also

ಗುದದ್ವಾರಕ್ಕೆ ಏರ್‌ಬಿಟ್ಟು ಯುವಕ ದುರ್ಮರಣ!

Spread the loveಬೆಂಗಳೂರು: ಇಬ್ಬರು ಸ್ನೇಹಿತರು ತಮಾಷೆ ಮಾಡುವ ಬರದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾಹನ ಸರ್ವೀಸ್‌ ಸೆಂಟರ್‌ನಲ್ಲಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ